BIG NEWS: ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ YSV ದತ್ತಗೆ ಮತ್ತೊಂದು ಸಂಕಷ್ಟ

ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತಮಗೆ ಸಿಗುವ ಭರವಸೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ವೈ.ಎಸ್.ವಿ. ದತ್ತ ಕಾಂಗ್ರೆಸ್ ಕೈ ಕೊಡುತ್ತಿದ್ದಂತೆ ಮತ್ತೆ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

ಅಲ್ಲದೆ ಅವರಿಗೆ ಕಡೂರು ಕ್ಷೇತ್ರದ ಜೆಡಿಎಸ್ ಟಿಕೆಟ್ ಲಭ್ಯವಾಗಿದ್ದು, ನಾಮಪತ್ರ ಸಲ್ಲಿಕೆಗೂ ಮುನ್ನ ಹೊಸ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ದತ್ತ ಅವರಿಗೆ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗಿದೆ.

ಖುದ್ದು ಹಾಜರಾತಿಯಿಂದ ತಮಗೆ ವಿನಾಯಿತಿ ನೀಡಬೇಕೆಂದು ವೈ.ಎಸ್.ವಿ. ದತ್ತ ಅರ್ಜಿ ಸಲ್ಲಿಸಿದ್ದು, ನ್ಯಾಯಾಧೀಶ ಜೆ. ಪ್ರೀತ್ ಇದನ್ನು ತಳ್ಳಿ ಹಾಕಿದ್ದಾರೆ. ಅಲ್ಲದೆ ಏಪ್ರಿಲ್ 26ರಂದು ದತ್ತ ಅವರನ್ನು ಹಾಜರುಪಡಿಸಲು ಸೂಚನೆ ನೀಡಲಾಗಿದೆ. ಸೋಮೇಗೌಡ ಎಂಬವರು ದತ್ತ ವಿರುದ್ಧ ಚೆಕ್ ಬೌನ್ಸ್ ಕುರಿತ ಖಾಸಗಿ ದೂರು ದಾಖಲಿಸಿದ್ದು, ಇದರ ವಿಚಾರಣೆ ನಡೆಯುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read