BIG NEWS: ಕಳೆನಾಶಕ ಸಿಂಪಡಿಸಲು ಹೋಗಿ ದುರಂತ; ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಸಾವು

ಹಳಿಯಾಳ: ಕಳೆ ನಾಶಕ ಸಿಂಪಡಿಸಿ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ.

ಯೋಗೇಶ್ ನಾಯಕ್ ಮೃತ ಅರಣ್ಯಾಧಿಕಾರಿ. ಹಳಿಯಾಳ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಕುಮಟಾ ತಾಲುಕಿನ ಬಾಡ ಗ್ರಾಮದ ನಿವಾಸಿಯಾಗಿದ್ದ ಯೋಗೇಶ್, ಕಳೆ ನಾಶಕ ಸಿಂಪಡಿಸಲು ಹೋಗಿದ್ದರು. ಕಳೆ ನಾಶಕ ಸಿಂಪಡಣೆ ಬಳಿಕ ತೀವ್ರ ಅಸ್ವಸ್ಥಗೊಂಡಿದ್ದ ಯೋಗೇಶ್ ನಾಯಕ್, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read