BIG NEWS: ಕಿಡ್ನಿ ಮಾರಿ ಹಣ ಹೊಂದಿಸುತ್ತೇನೆ; ವೈ.ಸಿ.ಸಿದ್ದರಾಮಯ್ಯಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎಂದ ಯುವಕ

ತುಮಕೂರು: ಇಲ್ಲೋರ್ವ ಅಭಿಮಾನಿ ತನ್ನ ನಾಯಕನಿಗೆ ಕಾಂಗ್ರೆಸ್ ಟಿಕೆಟ್ ನೀಡಿ, ಕಿಡ್ನಿ ಮಾರಿ ಹಣ ಹೊಂದಿಸುತ್ತೇನೆ ಎಂದು ಹೇಳುವ ಮೂಲಕ ಹುಚ್ಚಾಟ ಮೆರೆದಿದ್ದಾನೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೈ.ಸಿ.ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡಿ ಎಂದು ಕೆಂಕೆರೆ ಗ್ರಾಮದ ಪ್ರಭಾಕರ್ ಎಂಬ ಯುವಕ ಪಟ್ಟು ಹಿಡಿದಿದ್ದು, ಇಂತಹ ಮೊಂಡಾಟ ಮೆರೆದಿದ್ದಾನೆ.

ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಯುವಕ ಕೆಂಕೆರೆ ಗ್ರಾಮದ ಪ್ರಭಾಕರ್, ಕಳೆದ ಬಾರಿ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದನಂತೆ. ಈ ವೇಳೆ ವೈ.ಸಿ.ಸಿದ್ದರಾಮಯ್ಯ ಸಾಕಷ್ಟು ಸಹಾಯ ಮಾಡಿದ್ದರಂತೆ. ಚಿಕ್ಕನಾಯಕನಹಳ್ಳಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಸಿದ್ದರಾಮಯ್ಯ ಅವರಿಗೆ ಟಿಕೆಟ್ ಕೊಡುವಂತೆ ಯುವಕ ಮನವಿ ಮಾಡಿದ್ದಾನೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read