BIG NEWS: ಕುಡಿದ ಮತ್ತಿನಲ್ಲಿ ಕಟ್ಟಡದಿಂದ ಜಿಗಿದು ಯುವಕ ಸಾವು

ಬೆಳಗಾವಿ: ಕುಡಿದ ಮತ್ತಿನಲ್ಲಿ ಯುವಕನೊಬ್ಬ ಕಟ್ಟಡದ 3ನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿರುವ ಘಟನೆ ಬೆಳಗಾವಿ ನಗರದ ಅಂಬೇಡ್ಕರ್ ರಸ್ತೆಯ ತಮ್ಮಣ್ಣ ಆರ್ಕೆಡ್ ನಲ್ಲಿ ನಡೆದಿದೆ.

ಯೋಗೇಶ್ ಶಾನಭಾಗ (28) ಮೃತ ಯುವಕ. ಈತ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಮೂಲದವರು. ಸ್ನೇಹಿತರೊಂದಿಗೆ ಬ್ರೂ 59 ಪಬ್ ಗೆ ಬಂದಿದ್ದು, ಕುಡಿದ ಮತ್ತಿನಲ್ಲಿ ಪಬ್ ನ ಕಿಟಕಿ ಬಳಿ ಬಂದ ಯುವಕ ಏಕಾಏಕಿ ಕಟ್ಟಡದಿಂದ ಕೆಳಗೆ ಜಿಗಿದಿದ್ದಾನೆ.

ಗಂಭೀರವಾಗಿ ಗಾಯಗೊಂಡಿದ್ದ ಯೋಗೇಶ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read