BIG NEWS: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ

ವಿಜಯಪುರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಸಣ್ಣ ಅವಘಡ ಸಂಭವಿಸಿದ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ ನಗರದ ಸೈನಿಕ ಶಾಲಾ ಆವರಣದಲ್ಲಿ ನಡೆಯುತ್ತಿದ್ದ ಸಮಾವೇಶಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮಿಸಿದ್ದಾರೆ. ಈ ವೇಳೆ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ಚಕ್ರದ ಗಾಳಿಯ ರಭಸಕ್ಕೆ ಬ್ಯಾರಿಕೇಡ್ ಗಳು ನೆಲಕ್ಕುರುಳಿವೆ. ನೆಲಕ್ಕುರುಳಿದ ಬ್ಯಾರಿಕೇಡ್ ಗಳನ್ನು ತಕ್ಷಣ ಸರಿಪಡಿಸಲು ಪೊಲೀಸರು ಮುಂದಾಗಿದ್ದಾರೆ.

ಈ ವೇಳೆ ಸುತ್ತಲು ಇದ್ದ ಅಭಿಮಾನಿಗಳು, ಜನರು ಬ್ಯಾರಿಕೇಡ್ ಗಳನ್ನು ದಾಟಿ ಹೆಲಿಕಾಪ್ಟರ್ ನತ್ತ ಮುನ್ನುಗ್ಗಿದ್ದಾರೆ. ತಕ್ಷಣ ಪೊಲೀಸರು ಎಲ್ಲರನ್ನೂ ನಿಯಂತ್ರಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಅವಾಂತರ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read