BIG NEWS: ಕೋರ್ಟ್ ಗೆ ಹಾಜರುಪಡಿಸಲು ಕರೆತಂದಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿ ಸಾವು

ಬೆಂಗಳೂರು: ಕೋರ್ಟ್ ಗೆ ಹಾಜರುಪಡಿಸಲೆಂದು ಕರೆತಂದಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿಯೇ ಸಾವನ್ನಪ್ಪಿದ ಘಟನೆ ಬೆಂಗಳುರಿನ ಕಾಟನ್ ಪೇಟೆ ಪೊಲಿಸ್ ಠಾಣೆಯಲ್ಲಿ ನಡೆದಿದೆ.

ವಿನೋದ್ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟ ಆರೋಪಿ. 2017ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿ ವಿನೋದ್ ನಾಪತ್ತೆಯಾಗಿದ್ದ. ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಕೋರ್ಟ್, ಆರೋಪಿ ವಿನೋದ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

ಈ ಪ್ರಕರಣ ಸಂಬಂಧ ನಿನ್ನೆ ವಿನೋದ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇಂದು ಕೋರ್ಟ್ ಗೆ ಹಾಜರು ಪಡಿಸಲು ಸಿದ್ಧತೆ ನಡೆಸಿದ್ದರು. ಆದರೆ ಆರೋಪಿ ವಿನೋದ್ ಕೋರ್ಟ್ ಗೆ ಹಾಜರಾಗುವ ಮುನ್ನವೇ ಠಾಣೆಯಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read