BIG NEWS: ತಲೆಕೆಳಗಾದ ಮಾಧ್ಯಮಗಳ ಚುನಾವಣೋತ್ತರ ‘ಲೆಕ್ಕಾಚಾರ’

ಈ ಬಾರಿಯ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆದಿದ್ದು, ಮತ ಎಣಿಕೆ ಕಾರ್ಯ ಇಂದು ನಡೆದಿದೆ. ಈ ಬಾರಿಯ ಫಲಿತಾಂಶದಲ್ಲಿ ಯಾರೂ ಊಹಿಸದ ರೀತಿಯಲ್ಲಿ ಮತದಾರ ತನ್ನ ತೀರ್ಪು ನೀಡಿದ್ದಾನೆ ಎಂದು ಎಲ್ಲರೂ ವಿಶ್ಲೇಷಿಸುತ್ತಿದ್ದಾರೆ.

ಜೂನ್ 1 ರಂದು 7ನೇ ಹಂತದ ಮತದಾನ ಪೂರ್ಣಗೊಂಡ ಬಳಿಕ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿದ್ದು, ಬಹುತೇಕ ಎಲ್ಲ ಸಮೀಕ್ಷೆಗಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ಹೇಳಲಾಗಿತ್ತು.

ಆದರೆ ಮತ ಎಣಿಕೆ ಸಂದರ್ಭದಲ್ಲಿ ಮತದಾರ ಬೇರೆಯದ್ದೇ ಆದ ರೀತಿಯ ತೀರ್ಪನ್ನು ನೀಡಿರುವುದು ಕಂಡು ಬರುತ್ತಿದೆ. ಎನ್ ಡಿ ಎ ಮತ್ತು ‘ಇಂಡಿಯಾ’ ಮೈತ್ರಿಕೂಟದ ನಡುವೆ ದೊಡ್ಡ ಹಣಾಹಣಿಯೇ ನಡೆದಿದೆ. ಸದ್ಯದ ಮಟ್ಟಿಗೆ NDA ಮೈತ್ರಿಕೂಟ ಮುನ್ನಡೆ ಸಾಧಿಸುತ್ತಿರುವಂತೆ ಕಂಡು ಬರುತ್ತಿದೆಯಾದರೂ ಅಂತಿಮ ಹಂತದ ಫಲಿತಾಂಶ ಪ್ರಕಟಗೊಂಡ ಬಳಿಕ ಯಾರು ಅಧಿಕಾರ ಹಿಡಿಯಲಿದ್ದಾರೆ ಎಂಬುದು ಸ್ಪಷ್ಟವಾಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read