BIG NEWS: ದಂತವೈದ್ಯೆ ಆತ್ಮಹತ್ಯೆಗೆ ಶರಣು

ಬೆಂಗಳೂರು: ಪ್ರೇಮ ವೈಫಲ್ಯದಿಂದ ಮನನೊಂದ ದಂತ ವೈದ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪ್ರಿಯಾಂನ್ಶಿ ಆತ್ಮಹತ್ಯೆ ಮಾಡಿಕೊಂಡಿರುವ ದಂತವೈದ್ಯೆ. ಉತ್ತರ ಪ್ರದೇಶ ಮೂಲದ ಪ್ರಿಯಾಂನ್ಶಿ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅದೇ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯ ಸುಮಿತ್ ನನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಮದುವೆ ನಿರಾಕರಿಸಿದ ಕಾರಣಕ್ಕೆ ಮನನೊಂದ ಪ್ರಿಯಾಂನ್ಶಿ ಮನೆಯ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜನವರಿ 25ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read