BIG NEWS: ದಶಪಥದಲ್ಲಿ ಬರುವ ಪ್ರತಿ ಹಳ್ಳಿಗೂ ಸ್ಕೈ ವಾಕ್; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೀರ್ಮಾನ

ದಕ್ಷಿಣ ಭಾರತದ ಮೊದಲ ಪ್ರವೇಶ – ನಿರ್ಗಮನ ನಿರ್ಬಂಧಿತ ಹೆದ್ದಾರಿ ಎಂಬ ಹೆಗ್ಗಳಿಕೆ ಹೊಂದಿರುವ ಬೆಂಗಳೂರು – ಮೈಸೂರು ದಶಪಥದಲ್ಲಿ ಬರುವ ಪ್ರತಿಯೊಂದು ಹಳ್ಳಿಗೂ ‘ಸ್ಕೈ ವಾಕ್’ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೀರ್ಮಾನಿಸಿದೆ. ಈ ಮೂಲಕ ಸ್ಥಳೀಯರು, ರಸ್ತೆ ದಾಟುವಾಗ ಸಂಭವಿಸುವ ಅಪಘಾತ ತಡೆಗಟ್ಟಬಹುದು ಎಂದು ಚಿಂತಿಸಲಾಗಿದೆ.

118 ಕಿಲೋಮೀಟರ್ ಉದ್ದದ ಈ ಎಕ್ಸ್ಪ್ರೆಸ್ ವೇ ನಲ್ಲಿ ಹೆದ್ದಾರಿಯ ಎರಡೂ ಕಡೆ ಬೇಲಿ ನಿರ್ಮಿಸಿ ರಸ್ತೆ ದಾಟುವುದನ್ನು ಸಂಪೂರ್ಣವಾಗಿ ನಿರ್ಬಧಿಸಲಾಗಿದ್ದರೂ ಸಹ ಸ್ಥಳೀಯರು ಬೇಲಿ ಮುರಿದು ರಸ್ತೆ ದಾಟಿದ ಘಟನೆಗಳು ನಡೆದಿದ್ದು, ಇದೇ ಕಾರಣಕ್ಕೆ ಸಂಭವಿಸಿದ ಅಪಘಾತದಲ್ಲಿ ಹಲವರು ಮೃತಪಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಪ್ರತಿ ಹಳ್ಳಿಗೂ ಸ್ಕೈ ವಾಕ್ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಹೀಗಾಗಿ ಮಂಡ್ಯ ಜಿಲ್ಲಾ ವ್ಯಾಪ್ತಿಯ 55 ಕಿ.ಮೀ. ಉದ್ದದ ಹೆದ್ದಾರಿಯಲ್ಲಿ 18 ಕಡೆ, ಮೈಸೂರು, ರಾಮನಗರ, ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ 21 ಕಡೆ ಸ್ಥಳ ಗುರುತಿಸಲಾಗಿದ್ದು, ಭೂಸ್ವಾಧೀನಕ್ಕಾಗಿ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read