BIG NEWS: ಧಾರಾಕಾರ ಮಳೆ; ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿದ್ದ ಬಿಬಿಎಂಪಿ ಅಧಿಕಾರಿಗಳಿಗೆ ಮಳೆ ಅಡ್ದಿಯಾಗಿದೆ.

ಮಹಾದೇವಪುರ ವಿಭಾಗದ ದೊಡ್ಡನೆಕ್ಕುಂದಿ ಪ್ರದೇಶದಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಲಾಗಿದ್ದ ಕಟ್ಟಡಗಳು, ಮನೆಗಳ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮುಂದಾಗಿತ್ತು. ಆದರೆ ಬೆಂಗಳೂರು ನಗರದಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತೆರವು ಕಾರ್ಯಾಚಾರಣೆ ಸಾದ್ಯವಾಗುತ್ತಿಲ್ಲ.

ಮಳೆ ಹಿನ್ನೆಲೆಯಲ್ಲಿ ದೊಡ್ದನೆಕ್ಕುಂದಿ ಬಳಿ ಬಿಬಿಎಂಪಿ ತೆರವು ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ಬಿಬಿಎಂಪಿ ಇಂಜಿನಿಯರ್ ಲೋಕೇಶ್ ಮಾಹಿತಿ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read