BIG NEWS: ನಮ್ಮಲ್ಲಿ ಬಣ ರಾಜಕೀಯವಿಲ್ಲ; ಅಮಿತ್ ಶಾ ಆಗಮನದಿಂದ ಕಿತ್ತೂರು ಕರ್ನಾಟಕದಲ್ಲಿ ಸಂಚಲನ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಕಿತ್ತೂರು ಕರ್ನಾಟಕ ಭಾಗದಲ್ಲಿ ಸಂಚಲನ ಮೂಡಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಮಿತ್ ಶಾ ಅವರು ಹುಬ್ಬಳ್ಳಿ, ಕುಂದಗೋಳ ಹಾಗೂ ಬೆಳಗಾವಿಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅಮಿತ್ ಶಾ ಆಗಮನದಿಂದಾಗಿ ಕಿತ್ತೂರು ಕರ್ನಾಟಕ ಭಾಗದಲ್ಲಿ ಸಂಚಲನವುಂಟಾಗಿದೆ ಎಂದರು.

ಈಗಾಗಲೇ ಮೈಸೂರು ಹಾಗೂ ಮಂಡ್ಯ ಭಾಗದಲ್ಲಿ ಅಮಿತ್ ಶಾ ಭೇಟಿ ಕೊಟ್ಟಿದ್ದರು. ಮುಂದಿನ ತಿಂಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಬೆಳಗಾವಿ ಬಿಜೆಪಿಯಲ್ಲಿ ಬಣ ರಾಜಕೀಯ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ನಮ್ಮ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯವೂ ಇಲ್ಲ, ಅಸಮಾಧಾನವೂ ಇಲ್ಲ. ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಒಗ್ಗಟ್ಟಿನಿಂದ ನಡೆದು ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read