BIG NEWS: ನಾಯಿ ನಿಯತ್ತಿನ ಪ್ರಾಣಿ ಎಂದು ತಿರುಗೇಟು ಕೊಟ್ಟ ಸಿಎಂ

ಬಳ್ಳಾರಿ: ಮೋದಿ ಮುಂದೆ ಸಿಎಂ ಬೊಮ್ಮಾಯಿ ನಾಯಿಮರಿ ತರ ಇರ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಇದು ಸಿದ್ದರಾಮಯ್ಯನವರ ವ್ಯಕ್ತಿತ್ವ ತೋರಿಸುತ್ತದೆ. ಅವರಿಗೆ ಜನರೇ ತಕ್ಕ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸಿದ್ದರಾಮಯ್ಯ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡಲ್ಲ, ಆದರೆ ಒಂದು ಮಾತು ಹೇಳುತ್ತೇನೆ. ನಾಯಿ ನಿಯತ್ತಿನ ಪ್ರಾಣಿ. ಇದನ್ನು ಅವರು ಅರ್ಥ ಮಾಡಿಕೊಳ್ಳಲಿ ಎಂದು ಟಾಂಗ್ ನೀಡಿದ್ದಾರೆ.

ಜನರಿಗೆ ನಿಯತ್ತಾಗಿ ನಾನು ಕೆಲಸ ಮಾಡುತ್ತಿರುವ ವ್ಯಕ್ತಿ. ನನಗೆ ನಾಯಿ ಅಂದ್ರೂ, ನಿಯತ್ತನ್ನು ಉಳಿಸಿಕೊಂಡಿದ್ದೇನೆ. ಅವ್ರ ರೀತಿ ಸಮಾಜ ಒಡೆಯೋದು, ಸುಳ್ಳು ಹೇಳೋದು ಮಾಡಿಲ್ಲ, ಸೌಭಾಗ್ಯ ಕೊಡುತ್ತೇವೆ ಎಂದು ದೌರ್ಭಾಗ್ಯ ಕೊಟ್ಟಿದ್ದು… ಈ ಕೆಲಸ ನಾವು ಮಾಡಿಲ್ಲ, ಸಿದ್ದರಾಮಯ್ಯನವರಿಗೆ ಜನ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read