BIG NEWS: ಪ್ರಚಾರದ ನೆಪದಲ್ಲಿ ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ; ಜೆಡಿಎಸ್ ಅಭ್ಯರ್ಥಿ ವಿರುದ್ಧ ಸಿಡಿದೆದ್ದ ಮಹಿಳೆಯರು

ತುಮಕೂರು: ಚುನಾವಣಾ ಪ್ರಚಾರದ ನೆಪದಲ್ಲಿ ಜೆಡಿಎಸ್ ಅಭ್ಯರ್ಥಿ ಗೋವಿಂದ ರಾಜು ಮಹಿಳೆಯರನ್ನು ಮಂಚಕ್ಕೆ ಕರೆದಿದ್ದಾರೆ ಎಂಬ ಆರೊಪ ಕೇಳಿಬಂದಿದ್ದು, ಸಿಡಿದೆದ್ದ ಮಹಿಳೆಯರು ಗೋವಿಂದ ರಾಜು ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ತುಮಕೂರು ಜೆಡಿಎಸ್ ಅಭ್ಯರ್ಥಿ ಗೋವಿಂದ ರಾಜು ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದು, ಅಭ್ಯರ್ಥಿಯನ್ನು ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿರುವ ಮಹಿಳೆಯರು, ಗೋ ಬ್ಯಾಕ್ ಗೋವಿಂದರಾಜು ಎಂದು ಘೋಷಣೆ ಕೂಗಿದ್ದಾರೆ. ಜೆಡಿಎಸ್ ನಿಂದ ಗೋವಿಂದರಾಜುಗೆ ಬಿ ಫಾರಂ ಕೊಡದಂತೆ ಒತ್ತಾಯಿಸಿದ್ದಾರೆ. ಜೆಡಿಎಸ್ ಗೆ ಹೆಣ್ಣು ಮಕ್ಕಳ ಮೇಲೆ ಗೌರವ ಇದ್ದರೆ ಗೋವಿಂದರಾಜುವನ್ನು ಪಕ್ಷದಿಂದ ವಜಾಗೊಳಿಸಲಿ ಎಂದು ಒತ್ತಾಯಿಸಿದ್ದಾರೆ.

ಗೋವಿಂದರಾಜು ಅಸಭ್ಯವಾಗಿ ನಡೆದುಕೊಂಡಿರುವ ಬಗ್ಗೆ ರೇಷ್ಮಾ ಎಂಬ ಮಹಿಳೆ ದೂರು ನೀಡಿದ್ದರು. ಅಲ್ಲದೇ ಗೋವಿಂದರಾಜು ಮಾತನಾಡಿರುವ ಆಡಿಯೋ ಕೂಡ ವೈರಲ್ ಆಗಿತ್ತು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read