BIG NEWS: ಬಿಪರ್ ಜಾಯ್ ಚಂಡಮಾರುತದ ಆರ್ಭಟ; ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಅಲೆಗಳ ಅಬ್ಬರ; ಬೃಹತ್ ಅಲೆಗಳಿಗೆ ಕುಸಿದು ಬಿದ್ದ ಕಟ್ಟಡ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತದ ಅಬ್ಬರ ಜೋರಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ.

ಸಮುದ್ರದಲ್ಲಿ ಆಳೆತ್ತರದ ಅಲೆಗಳು ಏಳುತ್ತಿದ್ದು, ಬೃಹತ್ ಅಲೆಗಳು ಕಡಲತಡಿಗೆ ಅಪ್ಪಳಿಸುತ್ತಿವೆ. ಅಲೆಗಳ ಹೊಡೆತಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಕಡಲ ತಡಿಯಲ್ಲಿ ಮನೆಗಳು, ಕಟ್ಟಡಗಳು ನೆಲಸಮವಾಗಿವೆ. ತೆಂಗಿನ ಮರಗಳು ಧರೆಗುರುಳಿವೆ.

ಚಂಡಮಾರುತದಿಂದಾಗಿ ಮಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿಯೂ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read