BIG NEWS: ಬಿಬಿಎಂಪಿ ಅಧಿಕಾರಿಗಳ ಜೊತೆ ಸುರ್ಜೇವಾಲ ಸಭೆ ವಿಚಾರ; ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ನಡೆಸಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕಾಫಿ ಕುಡಿದು ಹೋದೆವು ಹೊರತು ಯಾವುದೇ ಚರ್ಚೆ ನಡೆಸಿಲ್ಲ ಎಂದು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಅಧಿಕಾರಿಗಳ ಜೊತೆ ಸುರ್ಜೇವಾಲ ಯಾವುದೇ ಸಭೆ ನಡೆಸಿಲ್ಲ. ನಿನ್ನೆ ಕೇವಲ ಕಾಫಿ ಕುಡಿದು ಹೋದೆವು ಅಷ್ಟೆ. ಯಾವ ಚರ್ಚೆ ಕೂಡ ಆಗಿಲ್ಲ. ಸಭೆ ಬಗ್ಗೆ ಯಾವುದೇ ಪೂರ್ವ ನಿಯೋಜನೆಯೂ ಆಗಿಲ್ಲಾ ಎಂದರು.

ಇಂದು ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು ವಿಚಾರವಾಗಿಯೂ ಮಾತನಾಡಿದ ಸಚಿವರು, ದೂರು ಕೊಡಲಿ ಬಿಡಿ. ಈಗ ಅವರು ವಿರೋಧ ಪಕ್ಷದಲ್ಲಿದ್ದಾರೆ. ಬಿಜೆಪಿ ನಾಯಕರು ಹಿಂದೆ ಮಾಡಿದ್ದನ್ನು ಮರೆತು ಬಿಟ್ಟಿದ್ದಾರೆ. ನಾವು ಅಧಿಕಾರಕ್ಕೆ ಬಂದು ಇನ್ನೂ 20 ದಿನ ಆಗಿಲ್ಲ. ಬಿಜೆಪಿಯವರನ್ನು ಜನ ಎಲ್ಲಿ ಕೂರಿಸಬೇಕೋ ಅಲ್ಲಿ ಕೂರಿಸಿದ್ದಾರೆ ಟೀಕಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read