BIG NEWS: ಭಾರತ್ ಮಾತಾ ಮಂದಿರ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಮಂಗಳೂರು: ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ ಅಮಿತ್ ಶಾ, ಕರಾವಳಿಗೆ ಎಂಟ್ರಿ ಕೊಟ್ಟಿದ್ದು ಈಶ್ವರಮಂಗಲದಲ್ಲಿ ಭಾರತ್ ಮಾತಾ ಮಂದಿರ ಉದ್ಘಾಟನೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಹನುಮಗಿರಿ ಕ್ಷೇತ್ರದ ಪಂಚಮುಖಿ ಆಂಜನೇಯ ದೇವರ ದರ್ಶನ ಪಡೆದ ಅಮಿತ್ ಶಾ, ಬಳಿಕ ಹನುಮಗಿರಿಯ ಪಕ್ಕದಲ್ಲಿಯೇ ಇರುವ ಈಶ್ವರಮಂಗಲದಲ್ಲಿ ನಿರ್ಮಾಣಗೊಂಡಿರುವ ಭಾರತ್ ಮಾತಾ ಮಂದಿರ ಲೋಕಾರ್ಪಣೆ ಮಾಡಿದರು.

ಸುಮಾರು ಎರಡು ಎಕರೆ ಜಾಗದಲ್ಲಿ ಮಂದಿರ ನಿರ್ಮಾಣಗೊಂಡಿದ್ದು, 6 ಅಡಿ ಎತ್ತರ ಅಮೃತಶಿಲೆಯಲ್ಲಿ ನಿರ್ಮಿಸಲಾದ ಭಾರತ್ ಮಾತೆ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿದರು. ಬಳಿಕ ಪುತ್ತೂರಿನ ವಿವೇಕಾನಂದ ಶಾಲಾ ಆವರಣದಲ್ಲಿ ನಡೆಯಲಿರುವ ಬಿಜೆಪಿ ಬೃಹತ್ ಸಮಾವೇಶದಲ್ಲಿ ಅಮಿತ್ ಶಾ ಭಾಗಿಯಾದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read