BIG NEWS: ಮಂಗಳೂರಿನ ಪಿ.ಎ. ಎಂಜಿನಿಯರಿಂಗ್ ಕಾಲೇಜಿನ ಮೇಲೆ NIA ದಾಳಿ; ಓರ್ವ ವಿದ್ಯಾರ್ಥಿ ವಶಕ್ಕೆ

ಮಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎನ್ ಐ ಎ(ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ಮಂಗಳೂರಿನ ಪಿ.ಎ. ಎಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದಾರೆ.

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ರೂವಾರಿ ಶಂಕಿತ ಉಗ್ರ ಶಾರಿಕ್ ವಿಚಾರಣೆಯನ್ನು ತೀವ್ರಗೊಳಿಸಿರಿವ ಎನ್ ಐ ಎ ಅಧಿಕಾರಿಗಳು, ವಿಚಾರಣೆ ಬಳಿಕ ಮಂಗಳೂರಿನ ಪಿ.ಎ. ಎಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ 7 ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದು, ಇದೇ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ಶಂಕಿತ ಮಾಜ್ ಮುನೀರ್ ಬಗ್ಗೆಯೂ ಮಾಹಿತಿ ಕಲೆ ಹಾಕಿದ್ದಾರೆ. ಮಾಜ್ ಮುನೀರ್ ಜೊತೆ ಸಂಪರ್ಕದಲ್ಲಿದ್ದ ಓರ್ವ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ.

ಉಡುಪಿ ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿ ರಿಹಾನ್ ಶೇಖ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿರುವ ಆರೋಪದಲ್ಲಿ ರಿಹಾನ್ ನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read