BIG NEWS: ಮಾಜಿ ಸಿಎಂ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣ; ಕೇಸ್ ದಾಖಲಿಸಬೇಡಿ ಎಂದ BSY

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರು ಕೇಸ್ ದಾಖಲಿಸಬೇಡಿ ಎಂದು ಹೇಳಿದ್ದಾರೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಘಟನಾ ಸ್ಥಳ ಪರಿಶೀಲಿಸಿ ಮಾಹಿತಿ ಪಡೆದ ಗೃಹ ಸಚಿವರು, ಸುದ್ದಿಗಾರರೊಂದಿಗೆ ಮಾತನಾಡಿ, ಕೇಸ್ ದಾಖಲಿಸಬೇಡಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ ಕಲ್ಲು ತೂರಾಟದ ವೇಳೆ ಕೆಲವು ಪೊಲೀಸರಿಗೆ ಗಾಯಗಳಾಗಿವೆ ಎಂದರು.

ಗಲಾಟೆಯಲ್ಲಿ ಕೆಲ ಕ್ರಿಮಿನಲ್ ಹಿನ್ನೆಲೆಯುಳ್ಳವರೂ ಇದ್ದಾರೆ. ಈ ಘಟನೆಗಳ ಕುರಿತು ಸಂಪೂರ್ಣ ತನಿಖೆ ನಡೆಸಲಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ಕೆಲ ರಾಜಕೀಯ ನಾಯಕರು ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ ಎಲ್ಲವನ್ನೂ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read