BIG NEWS: ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಎಂದು ಬೆಂಬಲಿಗರ ಘೋಷಣೆ

ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಇದರ ಮಧ್ಯೆ ಕೆಲವೊಂದು ಸಮೀಕ್ಷೆಗಳು ತಮ್ಮ ಪರ ಇರುವುದರಿಂದ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೇರುವುದು ಖಚಿತ ಎಂಬ ವಿಶ್ವಾಸದಲ್ಲಿರುವ ನಾಯಕರು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.

ಇದರ ಜೊತೆಗೆ ಮುಖ್ಯಮಂತ್ರಿ ಯಾರಾಗಬೇಕೆಂಬ ವಿಚಾರವೂ ಆಗಾಗ ಮುನ್ನೆಲೆಗೆ ಬರುತ್ತಿದ್ದು, ಸಂದರ್ಶನ ಒಂದರಲ್ಲಿ ಸಿದ್ದರಾಮಯ್ಯ ಆಡಿದ್ದ ಮಾತು ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಬಳಿಕ ಇದಕ್ಕೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ ತಮ್ಮ ಮಾತುಗಳನ್ನು ತಿರುಚಲಾಗಿದೆ ಎಂದಿದ್ದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯದ ಮುಖ್ಯಮಂತ್ರಿಯಾದರೆ ಇದಕ್ಕೆ ನನ್ನ ಸಂಪೂರ್ಣ ಒಪ್ಪಿಗೆ ಇದೆ ಎಂದಿದ್ದರು. ಇದರ ಮಧ್ಯೆ ಇಂದು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಹೆಲಿಪ್ಯಾಡ್ ನಲ್ಲಿ ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಎಂದು ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ.

ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ತೆರಳುವ ಸಲುವಾಗಿ ಶೃಂಗೇರಿ ಹೆಲಿಪ್ಯಾಡ್ ಗೆ ಬಂದ ವೇಳೆ ಅವರ ಬೆಂಬಲಿಗರು ಈ ಘೋಷಣೆ ಕೂಗಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read