BIG NEWS: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹೀನಾಯವಾಗಿ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದು ಸಂಜೆ ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಸಧ್ಯದ ಮಾಹಿತಿ ಪ್ರಕಾರ ಬಿಜೆಪಿ 66 ಸ್ಥಾನಗಳಲ್ಲಿ ಗೆಲುವು ಕಾಯ್ದುಕೊಂಡಿದ್ದರೆ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ 19 ಹಾಗೂ ಇತರೆ 4 ಸ್ಥಾನಗಳಲ್ಲಿ ಗೆಲುವು ಪಡೆದಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read