BIG NEWS: ರಮೇಶ್ ಜಾರಕಿಹೊಳಿ ದೆಹಲಿ ಟೂರ್ ಗೆ ಟಾಂಗ್ ನೀಡಿದ ಡಿ.ಕೆ.ಶಿವಕುಮಾರ್

ಕೋಲಾರ: ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಿಡಿ ಕೇಸ್ ಸಿಬಿಐ ತನಿಖೆಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದ್ದು, ಈ ವಿಚಾರವಾಗಿ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಅವರು ಯಾವ ತನಿಖೆ ಬೇಕಾದ್ರೂ ಮಾಡಲಿ ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಕೋಲಾರದ ಕುರುಡುಮಲೆ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜ್ಯಕ್ಕೆ ಎದುರಾಗಿರುವ ಎಲ್ಲಾ ವಿಘ್ನಗಳು ನಿವಾರಣೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ರಮೇಶ್ ಜಾರಕಿಹೊಳಿ ದೆಹಲಿ ಟೂರ್ ವಿಚಾರವಾಗಿ ಮಾತನಾಡಿದ ಅವರು, ನನ್ನ ಮೇಲೆ ಯಾವ ಪ್ರಯೋಗ ಬೇಕಾದರೂ ಮಾಡಲಿ ಎಲ್ಲವನ್ನು ಎದುರಿಸುತ್ತೇನೆ. ಸಿಬಿಐ ದಾಳಿಯನ್ನೂ ಎದುರಿಸಲು ಸಿದ್ಧನಾಗಿದ್ದೇನೆ. ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ಟಾಂಗ್ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read