BIG NEWS: ರೈತ ವಿದ್ಯಾನಿಧಿ ಯೋಜನೆ ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿಸ್ತರಣೆ

ಬೆಂಗಳೂರು: ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಮೀನುಗಾರರು, ಟ್ಯಾಕ್ಸಿ ಆಟೋ ಚಾಲಕರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ ಮಾಡಲಾಗುವುದು. ಇದಕ್ಕಾಗಿ ಹೆಚ್ಚುವರಿ 141 ಕೋಟಿ ಅನುದಾನ ಘೋಷಣೆ ಮಾಡಲಾಗುವುದು ಎಂದರು.

ಸರ್ಕಾರಿ ಪ್ರಥಮ ದರ್ಜೆ ಎಂಜಿನಿಯರಿಗ್ ಮತ್ತು ಐಐಟಿ ಕಾಲೇಜುಗಳ ಮೂಲಕ ವಿಶೇಷ ವಿದ್ಯಾರ್ಥಿಗಳಿಗೆ ಕೌಶಲ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗುವುದು.

ರಾಜ್ಯದಲ್ಲಿ ಹೆಚ್ಚುವರಿಯಾಗಿ 1230 ಶಾಲಾ ಕೊಠಡಿ ನಿರ್ಮಾಣ ಮಾಡಲಾಗುವುದು. ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಯೋಗ ತರಬೇತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read