BIG NEWS: ಲಿಂಬಾವಳಿ ಹೆಸರು ಬರೆದಿಟ್ಟು ಉದ್ಯಮಿ ಆತ್ಮಹತ್ಯೆ ಕೇಸ್; 6 ಜನರ ವಿರುದ್ಧ FIR ದಾಖಲು

ಶಿವಮೊಗ್ಗ: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 6 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಸಚಿವರು, ತಪ್ಪಿತಸ್ಥರು ಯಾರೇ ಇದ್ದರೂ ಅವರನ್ನು ಪೊಲೀಸರು ಬಂಧಿಸುತ್ತಾರೆ. ಈಗಾಗಲೇ 6 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯಾರೋ ಏನೋ ಬರೆದಿಟ್ಟಿದ್ದಾರೆ ಅಂದ ಮಾತ್ರಕ್ಕೆ ಬಂಧಿಸಲು ಆಗಲ್ಲ. ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರೆಸಿದ್ದಾರೆ ಎಂದರು.

ಯಾವುದೋ ವ್ಯವಹಾರಕ್ಕೆ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಪತ್ನಿ ಕೂಡ ದೂರು ನೀಡಿದ್ದಾರೆ ಎಂಬ ಮಾಹಿತಿ ಇದೆ. ತನಿಖೆ ಹಂತದಲ್ಲಿ ನಾನು ಏನು ಹೇಳಿದರೂ ತಪ್ಪಾಗುತ್ತೆ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read