BIG NEWS: ವಿದ್ಯಾರ್ಥಿನಿ ಆತ್ಮಹತ್ಯೆ; ಪ್ರಚೋದನೆ ನೀಡಿದ್ದ ಆರೋಪಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪಿಯನ್ನು ಸಾಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

19 ವರ್ಷದ ಭವ್ಯಾ ಮೃತ ವಿದ್ಯಾರ್ಥಿನಿ. ಬಿ ಎಸ್ ಸಿ ಓದುತ್ತಿದ್ದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಳು. ವಿದ್ಯಾರ್ಥಿನಿ ಆತ್ಮಹತ್ಯೆಗೆ ಯುವಕನ ಕಿರುಕುಳ ಕಾರಣ ಎಂಬ ಆರೋಪ ಕೇಳಿಬಂದಿತ್ತು.

ಸೊರಬ ತಾಲೂಕಿನ ಹುರಳಿಕೊಪ್ಪ ಗ್ರಾಮದ ಪ್ರದೀಪ್ ಎಂಬಾತ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ. ಇದನ್ನೇ ನೆಪವಾಗಿಸಿಕೊಂಡ ಆತ ಪದೇ ಪದೇ ಫೋನ್ ಮಾಡಿ ಪ್ರೀತಿಸುವಂತೆ ಭವ್ಯಾಳಿಗೆ ಪೀಡಿಸುತ್ತಿದ್ದ. ಈ ವಿಚಾರವನ್ನು ಭವ್ಯಾ ಪೋಷಕರಿಗೆ ತಿಳಿಸಿದ್ದಳು. ಪ್ರದೀಪ್ ಕಾಟಕ್ಕೆ ಬೇಸತ್ತು ಭವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಭವ್ಯಾ ಸಹೋದರ ಕೃಷ್ಣಮೂರ್ತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿಕೊಂಡು ಪ್ರದೀಪ್ ನನ್ನು ಪೊಲೀಸರು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read