BIG NEWS: ಶಾಸಕರು ದೂರು ಕೊಟ್ಟಿಲ್ಲ, ಆದರೆ ಸಭೆ ಕರೆಯಿರಿ ಎಂದಿದ್ದಾರೆ; ಸಿಎಂ ಸ್ಪಷ್ಟನೆ

ಹುಬ್ಬಳ್ಳಿ: ಸಚಿವರುಗಳ ವಿರುದ್ಧ ಅಸಮಾಧಾನಗೊಂಡಿರುವ ಹಲವು ಶಾಸಕರು ಪತ್ರ ಬರೆದು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಶಾಸಕರು ಪತ್ರ ಬರೆದು ಯಾವುದೇ ದೂರು ನೀಡಿಲ್ಲ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಾಸಕರು ದೂರು ನೀಡಿಲ್ಲ, ಶಾಸಕಾಂಗ ಸಭೆ ಕರೆಯುವಂತೆ ಹೇಳಿದ್ದಾರೆ. ಹೀಗಾಗಿ ಜುಲೈ 27ರಂದು ಸಭೆ ಕರೆಯಲಾಗಿದೆ ಎಂದರು.

ಕಳೆದ ವಾರ ಸಭೆ ನಡೆಸಬೇಕಿತ್ತು. ಆದರೆ ರಾಹುಲ್ ಗಾಂಧಿ ಬರುತ್ತಿದ್ದ ಕಾರಣ ಶಾಸಕಾಂಗ ಸಭೆ ಕರೆದಿರಲಿಲ್ಲ. ಈಗ ಗುರುವಾರ ಸಭೆ ಕರೆಯಲಾಗಿದೆ ಎಂದರು. ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ ಎರಡು ತಿಂಗಳೂ ಆಗಿಲ್ಲ. ಹೀಗಿರುವಾಗ ಅಸಮಾಧಾನ ಹೇಗೆ ಸಾಧ್ಯ. ಯಾವ ಅಸಮಾಧಾನವೂ ಇಲ್ಲ, ಯಾರೂ ದೂರು ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read