BIG NEWS: ಸಂಪುಟ ವಿಸ್ತರಣೆ ಸುಸೂತ್ರವಾಗಿ ನಡೆಯಲಿದೆ; ಸಚಿವ ಎಂ.ಬಿ. ಪಾಟೀಲ್

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ನಿಟ್ಟಿನಲ್ಲಿ ದೆಹಲಿಯಲ್ಲಿ ಕಸರತ್ತು ನಡೆದಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ತಮ್ಮ ಬೆಂಬಲಿಗರಿಗೆ ಮಂತ್ರಿ ಸ್ಥಾನ, ಖಾತೆ ನೀಡಲು ಮುಂದಾಗಿದ್ದಾರೆ.

ಇದೇ ವಿಚಾರವಾಗಿ ಹೈಕಮಾಂಡ್ ನಾಯಕರ ಜೊತೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಇಂದೇ ಸಂಪುಟ ವಿಸ್ತರಣೆ ವಿಚಾರ ಫೈನಲ್ ಆಗುವ ಸಾಧ್ಯತೆ ಇದೆ.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಸಂಪುಟ ವಿಸ್ತರಣೆ ಸುಸೂತ್ರವಾಗಿ ನಡೆಯಲಿದೆ. ಪ್ರಾದೇಶಿಕವಾರು, ಸಮುದಾಯವಾರು ಪ್ರಾತಿನಿಧ್ಯ ದೊರೆಯಬಹುದು. ಸಿಎಂ, ಡಿಸಿಎಂ, ಎಐಸಿಸಿ ಅಧ್ಯಕ್ಷರು ಚರ್ಚಿಸಿ ಫೈನಲ್ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read