BIG NEWS: ಸಚಿವ ಅಶ್ವತ್ಥನಾರಾಯಣ ಹೇಳಿಕೆಗೆ ಸಿ.ಟಿ. ರವಿ ಆಕ್ಷೇಪ; ಇಂತಹ ಹೇಳಿಕೆಯನ್ನು ಬಿಜೆಪಿ ಒಪ್ಪಲ್ಲ ಎಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ನವದೆಹಲಿ: ಟಿಪ್ಪು ಹೊಡೆದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಿ ಎಂಬ ಸಚಿವ ಅಶ್ವತ್ಥನಾರಾಯಣ ಹೇಳಿಕೆಗೆ ಸ್ವತ: ಬಿಜೆಪಿ ನಾಯಕರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಶ್ವತ್ಥನಾರಾಯಣ ಅವರ ಹೇಳಿಕೆಯನ್ನು ನಾವು ಒಪ್ಪಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಸಿ.ಟಿ.ರವಿ, ಬಿಜೆಪಿಯೂ ಸಚಿವರ ಈ ಹೇಳಿಕೆಯನ್ನು ಒಪ್ಪಲ್ಲ. ಅವರು ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ ಗೊತ್ತಿಲ್ಲ, ಆದರೆ ಇಂತಹ ಹೇಳಿಕೆಯನ್ನು ಒಪ್ಪಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ನಮ್ಮವರೇ, ಅವರು ರಾಜಕೀಯ ವಿರೋಧಿಯಷ್ಟೇ. ನಮ್ಮ ಶತ್ರುವಲ್ಲ. ಈ ದೇಶದಲ್ಲಿರುವ ಎಲ್ಲರೂ ನಮ್ಮವರೇ… ಶತ್ರುಗಳಲ್ಲ, ವಿಚಾರಗಳಲ್ಲಿ ಭಿನ್ನತೆ ಇರಬಹುದು ಅಷ್ಟೇ. ಆದರೆ ಸಿದ್ದರಾಮಯ್ಯ ನಮ್ಮ ಶತ್ರು ಅಲ್ಲ. ಸಿದ್ದರಾಮಯ್ಯ ಇನ್ನಷ್ಟು ಆಯುಷ್ಯವಂತರಾಗಿ, ಆರೋಗ್ಯವಂತರಾಗಿ ಬಾಳಲಿ ಎಂದೇ ನಾವು ಪ್ರಾರ್ಥಿಸುತ್ತೇವೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read