BIG NEWS: ಸಚಿವ ಅಶ್ವತ್ಥ ಅಸ್ವಸ್ಥರಾಗಿದ್ದಾಗ ಉರಿಗೌಡ, ನಂಜೇಗೌಡ ಭೇಟಿಯಾಗಿರಬೇಕು; ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ

ಬೆಂಗಳೂರು: ಉರಿಗೌಡ, ನಂಜೇಗೌಡ ಸಿನಿಮಾ ಕೈಬಿಟ್ಟ ವಿಚಾರವಾಗಿ ಸಂಸದ ಡಿ.ಕೆ.ಸುರೇಶ್, ಸಚಿವರಾದ ಮುನಿರತ್ನ ಹಾಗೂ ಅಶ್ವತ್ಥ ನಾರಾಯಣ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ವ್ಯಾಪಾರಸ್ಥರು ಯಾರನ್ನು ಬೇಕಾದರೂ ಇಟ್ಟುಕೊಂಡು ವ್ಯಾಪಾರ ಮಾಡ್ತಾರೆ. ಸಚಿವ ಮುನಿರತ್ನ ಒಕ್ಕಲಿಗರನ್ನು ಮುಂದಿಟ್ಟುಕೊಂಡು ವ್ಯಾಪಾರ ಮಾಡಲು ಹೊರಟಿದ್ದರು. ಅಂತವರನ್ನು ನಿರ್ಮಲಾನಂದನಾಥ ಶ್ರೀಗಳು ಏಕೆ ಕರೆಸಿದರೋ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಸಚಿವ ಅಶ್ವತ್ಥನಾರಾಯಣ ಅಸ್ವಸ್ಥರಾದಾಗ ಉರಿಗೌಡ, ನಂಜೇಗೌಡ ಭೇಟಿಯಾಗಿರಬೇಕು. ಚಿತ್ರ ನಿರ್ಮಾಣ ಕೈಬಿಟ್ಟೆ ಎನ್ನುವುದು ಗಿಮಿಕ್. ಸಚಿವ ಮುನಿರತ್ನ ಗಿಮಿಕ್ ಮಾಡಿಕೊಂಡೇ ರಾಜಕೀಯಕ್ಕೆ ಬಂದವರು ಎಂದು ಗುಡುಗಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read