BIG NEWS: ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದ ಸಚಿವ ಮಹದೇವಪ್ಪ; ಕೇಳ್ರಪ್ಪೋ ಕೇಳಿ…… ಎಂದು ಕಾಂಗ್ರೆಸ್ ಕಾಲೆಳೆದ ಬಿಜೆಪಿ

 

ಬೆಂಗಳೂರು: ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂಬ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಹೇಳಿಕೆ ಬೆನ್ನಲ್ಲೇ ವಿಪಕ್ಷ ಬಿಜೆಪಿ ಕಾಂಗ್ರೆಸ್ ನಾಯಕರ ಕಾಲೆಳೆದಿದೆ.

ಎರಡುವರೆ ವರ್ಷ ಸಿದ್ದರಾಮಯ್ಯ ಸಿಎಂ ಉಳಿದ ಎರಡುವರೆ ವರ್ಷ ಡಿ.ಕೆ.ಶಿವಕುಮಾರ್ ಸಿಎಂ ಎಂಬ ರೀತಿಯಲ್ಲಿ ಅಧಿಕಾರ ಹಂಚಿಕೆ ಆಧಾರದ ಮೇಲೆ ಮುಖ್ಯಮಂತ್ರಿ ಹುದ್ದೆ ನೀಡಲಾಗಿರುವ ಬೆನ್ನಲ್ಲೇ ಈಗ ಸಚಿವ ಹೆಚ್.ಸಿ.ಮಹದೇವಪ್ಪ, ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಎಂಬ ಅರ್ಥದಲ್ಲಿ ಮಾತನಾಡಿದ್ದು, ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಹೇಳಿರುವುದು ಚರ್ಚೆಗೆ ಕಾರಣವಾಗಿದೆ.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ ಕೇಳ್ರಪ್ಪೋ ಕೇಳಿ, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಮುಂದುವರೆಯುತ್ತಾರೆ ಎಂದು ಸಮಾಜಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ ಎಂದು ಕಾಲೆಳೆದಿದೆ.

ಇದೇ ವಿಚಾರವಾಗಿ ಮಾತನಾಡಿರುವ ಎಂಎಲ್ ಸಿ ರವಿಕುಮಾರ್, ಸಿದ್ದರಾಮಯ್ಯನವರೇ ಸಿಎಂ ಆಗಿ 5 ವರ್ಷ ಮುಂದುವರೆಯಲಿದ್ದಾರಾ ಎಂಬ ಬಗ್ಗೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಆಗಲಿ ಅಥವಾ ರಾಹುಲ್ ಗಾಂಧಿಯವರಾಗಲಿ ಸ್ಪಷ್ಟನೆ ನೀಡಲಿ, ಮುಖ್ಯಮಂತ್ರಿ ವಿಚಾರವಾಗಿ ಕಾಂಗ್ರೆಸ್ ನಾಯಕರಲ್ಲಿ ಇನ್ನೂ ಗೊಂದಲವಿದೆ. ಮೊದಲು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read