BIG NEWS: ಸಿದ್ದರಾಮಯ್ಯ ಕ್ಷೇತ್ರದ ಸ್ಫೋಟಕ ಭವಿಷ್ಯ ನುಡಿದ BSY

ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸ್ಪರ್ಧೆ ಕ್ಷೇತ್ರದ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕೋಲಾರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಿಲ್ಲ. ಕೋಲಾರದಿಂದ ಸ್ಪರ್ಧಿಸಿದರೆ ಅವರಿಗೆ ಸೋಲು ನಿಶ್ಚಿತ. ಇದು ಸಿದ್ದರಾಮಯ್ಯನವರಿಗೂ ಗೊತ್ತು. ಕೋಲಾರದಿಂದ ಸ್ಪರ್ಧಿಸುವುದಾಗಿ ಡ್ರಾಮಾ ಮಾಡ್ತಿದ್ದಾರೆ. ಇದೆಲ್ಲ ರಾಜಕೀಯ ದೊಂಬರಾಟ ಎಂದು ಹೇಳಿದರು.

ಅಂತಿಮವಾಗಿ ಸಿದ್ದರಾಮಯ್ಯ ಮೈಸೂರಿಗೆ ಬರಲು ಪ್ರಯತ್ನ ಮಾಡಿದ್ದಾರೆ. ಇದು ಅವರ ರಾಜಕೀಯ ಸ್ಟ್ರಾಟಜಿ. ಅವರು ಏನು ಮಾಡುತ್ತಾರೆ ಮಾಡಲಿ. ನಾವೂ ನಮ್ಮದೇ ಸ್ಟ್ರ್ಯಾಟಜಿ ಮಾಡುತ್ತೇವೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read