ಹಿಂಸಾಚಾರ ಪೀಡಿತ ರಾಜ್ಯ ಮಣಿಪುರದ ಚುರಾಚಂದ್ಪುರ ಜಿಲ್ಲೆಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಪೊಲೀಸರು ತಡೆದಿದ್ದು ರಾಹುಲ್ ಗಾಂಧಿ ಅಲ್ಲಿಂದ ವಾಪಸ್ಸಾಗಿದ್ದಾರೆ. ಪೊಲೀಸರು ರಾಹುಲ್ ಪಡೆ ತಡೆದ ನಂತರ ಅವರು ಇಂಫಾಲ್ಗೆ ಮರಳಿದರು. ಇಂದು ಮುಂಜಾನೆ ಹಿಂಸಾಚಾರ ಪೀಡಿತ ರಾಜ್ಯಕ್ಕೆ ಎರಡು ದಿನಗಳ ಭೇಟಿಗಾಗಿ ಮಣಿಪುರದ ರಾಜಧಾನಿ ಇಂಫಾಲ್ಗೆ ರಾಹುಲ್ ಗಾಂಧಿ ಆಗಮಿಸಿದರು.
ಈ ಕುರಿತು ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಬಿಷ್ಣುಪುರ ಬಳಿ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನವನ್ನು ಪೊಲೀಸರು ತಡೆದಿದ್ದಾರೆ. ರಾಹುಲ್ ಗಾಂಧಿ ನೋಡಲು ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದಾರೆ. ಪೊಲೀಸರು ನಮಗೆ ಏಕೆ ಅವಕಾಶ ನೀಡುತ್ತಿಲ್ಲ ಎಂದು ನನಗೆ ತಿಳಿದಿಲ್ಲ. ಸಂತ್ರಸ್ತ ಜನರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ಭೇಟಿ ನೀಡುತ್ತಿದ್ದರು. ಸ್ಥಳೀಯ ಪೊಲೀಸರಿಗೆ ಯಾರು ಸೂಚನೆ ನೀಡಿದ್ದಾರೆಂದು ನನಗೆ ತಿಳಿದಿಲ್ಲ ಎಂದು ಅವರು ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಘಟನೆಯ ಬಗ್ಗೆ ಪ್ರತಿಕ್ರಿಯಿಸಿ ಮಣಿಪುರ ಸರ್ಕಾರವು “ರಾಹುಲ್ ಗಾಂಧಿಯವರ ಸಹಾನುಭೂತಿಯ ಪ್ರಭಾವವನ್ನು ತಡೆಯಲು ನಿರಂಕುಶ ವಿಧಾನಗಳನ್ನು ಬಳಸುತ್ತಿದೆ” ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಅವರು, ಮಣಿಪುರದಲ್ಲಿ ರಾಹುಲ್ ಗಾಂಧಿ ಬೆಂಗಾವಲು ಪಡೆಯನ್ನು ಬಿಷ್ಣುಪುರ ಬಳಿ ಪೊಲೀಸರು ತಡೆದಿದ್ದಾರೆ. ಅವರು ಪರಿಹಾರ ಶಿಬಿರಗಳಲ್ಲಿ ನರಳುತ್ತಿರುವ ಜನರನ್ನು ಭೇಟಿ ಮಾಡಲು ಮತ್ತು ಕಲಹ ಪೀಡಿತ ರಾಜ್ಯದಲ್ಲಿನ ಪರಿಸ್ಥಿತಿ ನೋಡಿ ಸಾಂತ್ವನ ಹೇಳಲು ಹೋಗುತ್ತಿದ್ದಾರೆ. ಮಣಿಪುರದ ಬಗ್ಗೆ ಮೌನ ಮುರಿಯಲು ಪ್ರಧಾನಿ ಮೋದಿ ತಲೆಕೆಡಿಸಿಕೊಂಡಿಲ್ಲ. ಈಗ ಅವರ ಡಬಲ್ ಇಂಜಿನ್ ವಿನಾಶಕಾರಿ ಸರ್ಕಾರಗಳು ರಾಹುಲ್ ಗಾಂಧಿಯವರ ಸಹಾನುಭೂತಿಯ ಪ್ರಭಾವವನ್ನು ನಿಲ್ಲಿಸಲು ನಿರಂಕುಶಾಧಿಕಾರದ ವಿಧಾನಗಳನ್ನು ಬಳಸುತ್ತಿವೆ. ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಮಾನದಂಡಗಳನ್ನು ಛಿದ್ರಗೊಳಿಸುತ್ತದೆ. ಮಣಿಪುರಕ್ಕೆ ಶಾಂತಿ ಬೇಕು, ಸಂಘರ್ಷವಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಜನಾಂಗೀಯ ಘರ್ಷಣೆಯಿಂದ ನಿರಾಶ್ರಿತರಾದ ಜನರನ್ನು ಪರಿಹಾರ ಶಿಬಿರಗಳಲ್ಲಿ ಭೇಟಿ ಮಾಡಲು ರಾಹುಲ್ ಗಾಂಧಿ ಪರಿಪುರ ರಾಜ್ಯಕ್ಕೆ ಎರಡು ದಿನಗಳ ಭೇಟಿಯಲ್ಲಿದ್ದಾರೆ. ನಾಗರಿಕರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಪಕ್ಷದ ಅಧಿಕಾರಿಗಳು ತಿಳಿಸಿದ್ದಾರೆ.
ಮೇ 3 ರಂದು ಮೊದಲ ಬಾರಿಗೆ ಹಿಂಸಾಚಾರ ನಡೆದ ನಂತರ ಈಶಾನ್ಯ ರಾಜ್ಯಕ್ಕೆ ರಾಹುಲ್ ಗಾಂಧಿ ಅವರ ಮೊದಲ ಭೇಟಿ ಇದಾಗಿದೆ.
ರಾಹುಲ್ ಗಾಂಧಿ ಅವರ ಮಣಿಪುರ ಭೇಟಿಯ ಬಗ್ಗೆ ಬಿಜೆಪಿ ವಾಗ್ದಾಳಿ ನಡೆಸಿದ್ದು, ಅವರನ್ನು ರಾಜಕೀಯ ಅವಕಾಶವಾದಿ ಎಂದು ಟೀಕಿಸಿದೆ.
Shri @RahulGandhi’s convoy in Manipur has been stopped by the police near Bishnupur.
He is going there to meet the people suffering in relief camps and to provide a healing touch in the strife-torn state.
PM Modi has not bothered to break his silence on Manipur. He has left…
— Mallikarjun Kharge (@kharge) June 29, 2023
#WATCH | Congress leader Rahul Gandhi reaches Imphal, Manipur.
He is on a two-day visit to the state and will visit relief camps and interact with civil society representatives in Imphal and Churachandpur during his visit. pic.twitter.com/Ov5YwHTOFH
— ANI (@ANI) June 29, 2023
#WATCH | Imphal, Manipur | Kh Debabrata, Working President MPCC on Rahul Gandhi's visit to Manipur, says "Rahul Gandhi will be visiting Churachandpur to meet people staying in the relief camps and stay with the affected families. Later he will visit Moirang and will interact with… pic.twitter.com/OPIpa83KxD
— ANI (@ANI) June 29, 2023
Not once did Rahul Gandhi visit Churachandpur in Manipur between 2015-17, to meet the victims of ethnic violence, that raged following Congress CM Okram Ibobi Singh Govt’s decision to pass three Bills – the Protection of Manipur People’s Bill, 2015, Manipur Land Revenue and Land…
— Amit Malviya (@amitmalviya) June 29, 2023