BIG NEWS: ಹೃದಯಾಘಾತದಿಂದ ಮೃತಪಟ್ಟ ಸನ್ಯಾಸಿ ಮನೆಯಲ್ಲಿ 30 ಲಕ್ಷಕ್ಕೂ ಅಧಿಕ ಹಣ ಪತ್ತೆ

ಚಿತ್ರದುರ್ಗ: ಹೃದಯಾಘಾತದಿಂದ ಮೃತಪಟ್ಟಿದ್ದ ಸನ್ಯಾಸಿಯ ಮನೆಯಲ್ಲಿ ಲಕ್ಷಾಂತರ ರೂಪಾಯಿ ಹಣ ಪತ್ತೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿರುವ ಗಂಗಾಧರ ಶಾಸ್ತ್ರಿ (70) ವಾರದ ಹಿಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇದೀಗ ಅವರ ಮನೆಯ ವಿವಿಧೆಡೆ ಇರಿಸಿದ್ದ 30 ಲಕ್ಷಕ್ಕೂ ಅಧಿಕ ಹಣ ಪತ್ತೆಯಾಗಿದೆ.

ಗಂಗಾಧರ ಶಾಸ್ತ್ರಿ, ಶಾಸ್ತ್ರ ಹೇಳುವುದು, ಶುಭಕಾರ್ಯ ಪೂಜೆ ಮಡಿಸುವುದು ಮಾಡುತ್ತಿದ್ದರು. 16 ಎಕರೆ ಜಮೀನು, 4 ಎಕರೆ ತೆಂಗಿನ ತೋಟ, ಗದ್ದೆ ಹೊಂದಿದ್ದರು. ಭಕ್ತರಿಂದ ಬಂದ ಕಾಣಿಕೆ ಹಣವೇ 46 ಸಾವಿರ ರೂಪಾಯಿ ಹಾಗೂ ಕೃಷಿ ಇನ್ನಿತರ ಆದಾಯದಿಂದ ಬಂದ 30 ಲಕ್ಷ ರೂ. ಅಧಿಕ ಹಣ ಪತ್ತೆಯಾಗಿದೆ. ಇದೀಗ ಶಾಸ್ತ್ರಿಗಳ ಮನೆ ಪರಿಶೀಲಿಸಿದಾಗ 30 ಲಕ್ಷಕ್ಕೂ ಅಧಿಕ ಹಣ ಪತ್ತೆಯಾಗಿದೆ.

ಶಾಸ್ತ್ರಿಗಳ ಜಮೀನಿನಲ್ಲಿಯೇ ಭಕ್ತರು ಗದ್ದುಗೆ ನಿರ್ಮಾಣಕ್ಕೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಭಕ್ತರ ಸಭೆ ಕರೆದು ಸಮಿತಿ ರಚಿಸಲು ನಿರ್ಧರಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read