BIG NEWS: ಹೃದಯಾಘಾತ; ಜೈಲಿನಲ್ಲಿಯೇ ಮೃತಪಟ್ಟ ಕೈದಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಸೋಮಶೇಖರ್ ಮೃತ ಕೈದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಅನೇಕಲ್ ತಾಲೂಕಿನ ನಿವಾಸಿಯಾಗಿರುವ ಸೋಮಶೇಖರ್, 6 ವರ್ಷಗಳ ಹಿಂದೆ ಪ್ರಕರಣವೊಂದರಲ್ಲಿ ಜೈಲುಶಿಕ್ಷೆಗೆ ಒಳಗಾಗಿದ್ದ.

ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದ ಕೈದಿ ಸೋಮಶೇಖರ್ ಗೆ ಏಕಾಏಕಿ ಹೃದಯಾಘಾತವಾಗಿದೆ. ತಕ್ಷಣ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read