BIG NEWS : ನಟ ದರ್ಶನ್ ಬಿಡುಗಡೆಗಾಗಿ ‘ಶಕ್ತಿ ದೇವತೆ’ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿ ದೇವರ ಮೊರೆ ಹೋಗಿದ್ದಾರೆ.

ಭೀಮನ ಅಮಾವಾಸ್ಯೆ ಪ್ರಯುಕ್ತ ಪತ್ನಿ ವಿಜಯಲಕ್ಷ್ಮಿ ನಿನ್ನೆ ಬೆಂಗಳೂರಿನ ಬನಶಂಕರಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತಿಯನ್ನು ಸಂಕಷ್ಟದಿಂದ ಪಾರು ಮಾಡು ಎಂದು ಪತ್ನಿ ವಿಜಯಲಕ್ಷ್ಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಸದ್ಯಕ್ಕೆ ಹೊರಗಡೆ ಬರುವುದು ಕಷ್ಟವಾಗಿದೆ. ಕೊಲೆ ಪ್ರಕರಣದಲ್ಲಿ ಹಲವು ಮಹತ್ವದ ಸಾಕ್ಷಿಗಳು ಸಿಕ್ಕಿರುವುದರಿಂದ ಸದ್ಯಕ್ಕೆ ನಟ ದರ್ಶನ್ ಬಿಡುಗಡೆ ಅಸಾಧ್ಯವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read