BIG NEWS: BSY ಪ್ರಭಾವ ಕುಗ್ಗಿಲ್ಲ; ಕಾರ್ಯಕರ್ತರೇ ಬಿಜೆಪಿಯ ಆಸ್ತಿ ಎಂದ ಬಿ.ವೈ. ವಿಜಯೇಂದ್ರ

ಮೈಸೂರು: ಬಿಜೆಪಿಯಲ್ಲಿ ಹೊಸ ಮುಖಗಳಿಗೆ ಅವಕಾಶ ಕೊಡಲಾಗಿದೆ. ಕಾರ್ಯಕರ್ತರ ಅಭಿಪ್ರಾಯ, ಸರ್ವೆ ನಡೆಸಿ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ವಿಜಯೇಂದ್ರ, ಪಕ್ಷದಿಂದ ಆಂತರಿಕ ಸರ್ವೆ ನಡೆಸಿ ಟಿಕೆಟ್ ಫೈನಲ್ ಮಾಡಲಾಗಿದೆ. ಈ ಹಿಂದೆ ಗುಜರಾತ್ ನಲ್ಲಿ ಮೊದಲ ಪ್ರಯೋಗ ಮಾಡಲಾಗಿತ್ತು. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದರು.

ಬಿಜೆಪಿಯಲ್ಲಿ ಬಿ ಎಸ್ ವೈ ಅವರ ಪ್ರಭಾವ ಕುಗ್ಗಿಲ್ಲ. ಬಿಜೆಪಿ ಯಾರೋ ಒಬ್ಬರಿಗೆ ಸೀಮಿತವಾಗಿರುವ ಪಕ್ಷವಲ್ಲ. ಲಕ್ಷಾಂತರ ಕಾರ್ಯಕರ್ತರೇ ಪಕ್ಷದ ಆಸ್ತಿ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read