BIG NEWS: ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ಖಂಡಿಸಿ ಇಂದು ‘ದಕ್ಷಿಣ ಕನ್ನಡ ಜಿಲ್ಲಾ ಬಂದ್’ ಕರೆ

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಂಗಳೂರಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ.

ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ ಎಂದು VHP ಮುಖಂಡ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.

ಎಲ್ಲಾ ವ್ಯಾಪಾರ, ವಹಿವಾಟು, ವಾಹನ ಸಂಚಾರ ಬಂದ್ ಮಾಡಲು ಕರೆ ನೀಡಲಾಗಿದೆ. ಸುಹಾಸ್ ಶೆಟ್ಟಿ ಮತ್ತು ಐವರು ಸಹಚರರು ಕಾರ್ ನಲ್ಲಿ ಹೋಗುತ್ತಿದ್ದರು. ಜಿಹಾದ್ ಇಸ್ಲಾಮಿಕ್ ಉಗ್ರ ಮುಸಲ್ಮಾನರು ಹತ್ಯೆ ಮಾಡಿದ್ದಾರೆ. ಇದು ಪೂರ್ವ ನಿಯೋಜಿತ ಕೃತ್ಯ ಎಂದು ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.

ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಿಂದೂ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಲಾಗಿದೆ. ಪೊಲೀಸ್ ಇಲಾಖೆ ವೈಫಲ್ಯದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಮಂಗಳೂರಿನಲ್ಲಿ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read