BIG NEWS: ಕನ್ನಡ ಚಲನಚಿತ್ರಗಳ ಒಟಿಟಿ ವೇದಿಕೆ ರಚನೆಗೆ ಸರ್ಕಾರದಿಂದ ಸಮಿತಿ ರಚನೆ

ಬೆಂಗಳೂರು: 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ “ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ OTT ವೇದಿಕೆಯನ್ನು ಸೃಜಿಸಲು ಕ್ರಮ ಕೈಗೊಳ್ಳಲಾಗಿದ್ದು, ಅನುಷ್ಠಾನಕ್ಕೆ ಸಮಿತಿ ರಚನೆ ಮಾಡಲಾಗಿದೆ.

2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ -443 ರಲ್ಲಿನ ಘೋಷಣೆಯನ್ವಯ, ಕನ್ನಡ ಚಲನಚಿತ್ರಗಳ ಪ್ರೋತ್ಸಾಹಕ್ಕಾಗಿ OTT ವೇದಿಕೆಯನ್ನು ಸೃಜಿಸಲು ಪೂರಕವಾಗಿ ಅಗತ್ಯ ಮಾಹಿತಿಯನ್ನು ಪಡೆದು ಯೋಜನೆಯ ರೂಪುರೇಷೆಗಳನ್ನು ರಚಿಸಲು ಅನುವಾಗುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರು ಮತ್ತು ಶ್ರೀ ಕಂಠೀರವ ಸ್ಟುಡಿಯೋದ ಅಧ್ಯಕ್ಷರನ್ನೊಳಗೊಂಡಂತೆ ನುರಿತ ತಜ್ಞರು/ತಾಂತ್ರಿಕ ಪರಿಣಿತರ ನಿಯೋಗವೊಂದನ್ನು ರಚಿಸಿ ಸಮಗ್ರ ಅಧ್ಯಯನ ಕೈಗೊಂಡು ಸರ್ಕಾರಕ್ಕೆ ವರದಿ ಪಡೆಯಲು ಅಗತ್ಯವಾದ ಅನುದಾನಕ್ಕೆ ಮಂಜೂರಾತಿ ನೀಡಿ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ -443 ರಲ್ಲಿನ ಘೋಷಣೆಯನ್ವಯ, ಕನ್ನಡ ಚಲನ ಚಿತ್ರಗಳ ಪ್ರೋತ್ಸಾಹಕ್ಕಾಗಿ OTT ವೇದಿಕೆಯನ್ನು ಸೃಜಿಸಲು ಪೂರಕವಾಗಿ ರೂಪುರೇಷೆಗಳನ್ನು ರಚಿಸಲು ಅಗತ್ಯ ಮಾಹಿತಿ ಸಂಗ್ರಹಿಸಿ ವರದಿಯನ್ನು ಸಿದ್ಧಪಡಿಸಲು ಈ ಕೆಳಕಂಡಂತೆ ವಿಷಯ ತಜ್ಞರು/ತಾಂತ್ರಿಕ ಪರಿಣಿತರನ್ನೊಳಗೊಂಡ ನಿಯೋಗವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಚಿಸಿ ಆದೇಶಿಸಿದೆ.

ಅಧ್ಯಕ್ಷರು

ಮೆಹಬೂಬ್ ಪಾಷಾ, ಅಧ್ಯಕ್ಷರು, ಶ್ರೀ ಕಂಠೀರವ ಸ್ಟುಡಿಯೋ ಲಿ., ಬೆಂಗಳೂರು

ಸದಸ್ಯರು

ಸಾಧುಕೋಕಿಲ, ಅಧ್ಯಕ್ಷರು ಕರ್ನಾಟಕ ಚಲನಚಿತ್ರ ಅಕಾಡೆಮಿ, ಬೆಂಗಳೂರು

ಕೆ.ಪಿ.ಶ್ರೀಕಾಂತ್, ಚಲನಚಿತ್ರ ನಿರ್ಮಾಪಕರು, ಬೆಂಗಳೂರು

ರಾಕ್‌ಲೈನ್ ವೆಂಕಟೇಶ್, ಚಲನಚಿತ್ರ ನಿರ್ಮಾಪಕರು/ವಿತರಕರು, ಬೆಂಗಳೂರು

ದುನಿಯಾ ವಿಜಯ್, ಚಲನಚಿತ್ರ ನಟರು, ಬೆಂಗಳೂರು

ಐವಾನ್ ಡಿಸಿಲ್ವ, ಸದಸ್ಯರು, ಕರ್ನಾಟಕ ಚಲನಚಿತ್ರ ಅಕಾಡೆಮಿ, ಬೆಂಗಳೂರು

ದೇಶಾದ್ರಿ ಹೆಚ್. ಸದಸ್ಯರು, ಕರ್ನಾಟಕ ಚಲನಚಿತ್ರ ಅಕಾಡೆಮಿ, ಬೆಂಗಳೂರು

ಜಂಟಿ ನಿರ್ದೇಶಕರು(ಛಾಯಾಚಿತ್ರ ಮತ್ತು ಚಲನಚಿತ್ರ ಶಾಖೆ)

ಸದಸ್ಯ ಕಾರ್ಯದರ್ಶಿ

ರಿಜಿಸ್ಟ್ರಾರ್, ಕರ್ನಾಟಕ ಚಲನಚಿತ್ರ ಅಕಾಡೆಮಿ, ಬೆಂಗಳೂರು

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read