BIG NEWS : ಸಚಿವ ‘ಶಿವಾನಂದ ಪಾಟೀಲ್’ ಮೇಲೆ ಸುರಿದಿದ್ದು ಹಣ ಅಲ್ಲ ಅದು ಕಾಗದ : ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು : ಸಚಿವ ಶಿವಾನಂದ ಪಾಟೀಲ್ ಮೇಲೆ ಸುರಿದಿದ್ದು ಹಣ ಅಲ್ಲ ಅದು ಕಾಗದ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ‘ ಸಚಿವ ಶಿವಾನಂದ ಪಾಟೀಲ್ ಮೇಲೆ ಸುರಿದಿದ್ದು ಹಣವಲ್ಲ ಕಾಗದ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅದು ಹಣವಲ್ಲ ಕಾಗದ ಎಸೆದಿದ್ದು ಎಂದು ಸಚಿವರ ಪರ ಬ್ಯಾಟಿಂಗ್ ಮಾಡಿದ್ದಾರೆ.

ಸಚಿವ ಶಿವಾನಂದ ಪಾಟೀಲ್ ಮೇಲೆ ನೋಟುಗಳ ಸುರಿಮಳೆಗೈದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರಿ ಚರ್ಚೆಗೆ ಕಾರಣವಾಗಿದೆ. ಮದುವೆ ಕಾರ್ಯಕ್ರಮಕ್ಕೆಂದು ಸಚಿವರು ಹೋಗಿದ್ದಾಗ ಅಲ್ಲಿ ನೋಟಿನ ಸುರಿಮಳೆಗೈದು ಸಚಿವರನ್ನು ಸ್ವಾಗತಿಸಲಾಗಿದೆ ಎಂದು ಹೇಳಲಾಗುತ್ತಿದೆ. ನಾಲ್ಕುದಿನಗಳ ಹಿಂದೆ ನಡೆದಿರುವ ಈ ಘಟನೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read