BIG NEWS : ಕಾವೇರಿ ಕಿಚ್ಚಿನ ನಡುವೆ ಹಲ್ ಚಲ್ ಎಬ್ಬಿಸಿದ ಎಂ.ಪಿ ರೇಣುಕಾಚಾರ್ಯ ಹೇಳಿಕೆ

ಬೆಂಗಳೂರು : ಕಾವೇರಿ ಕಿಚ್ಚಿನ ನಡುವೆ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ನೀಡಿರುವ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದೆ.

ಹೌದು. ಮಾಜಿ ಸಿಎಂ ಯಡಿಯೂರಪ್ಪ ವಿರೋಧಿ ಬಣಕ್ಕೆ ಟಾಂಗ್ ನೀಡಿರುವ ರೇಣುಕಾಚಾರ್ಯ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ವಿಚಾರಕ್ಕೂ ಟಾಂಗ್ ನೀಡಿದ್ದಾರೆ.

ಪ್ರಧಾನಿ ಮೋದಿಯವರು ಮಾಸ್ ಲೀಡರ್ .ಅವರ ಫೋಟೋ ಇಟ್ಟುಕೊಂಡರೆ ಸಾಲದು.ಅದನ್ನು ಮತವಾಗಿ ಪರಿವರ್ತಿಸಬೇಕು.ಆ ತಾಕತ್ತು ಇರುವುದು ಕೇವಲ ಬಿಎಸ್ ಯಡಿಯೂರಪ್ಪ ಹಾಗೂ ಅವರ ಮಗ ಬಿವೈ ವಿಜಯೇಂದ್ರಗೆ ಮಾತ್ರ ಎಂದರು. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿದ್ರೆ ಪಕ್ಷಕ್ಕೆ ಒಳ್ಳೆಯದಾಗುತ್ತದೆ, ಲೋಕಸಭೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಸಿಗುತ್ತದೆ ಎಂದು ಹೇಳಿದರು.
ಮೈತ್ರಿ ಬಗ್ಗೆ ಮಾತನಾಡಿದ ರೇಣುಕಾಚಾರ್ಯ ನಾವು ನೆಲ , ಜಲ ವಿಚಾರದಲ್ಲಿ ಒಂದಾಗಬೇಕು. ಇನ್ನೊಂದು ಪಕ್ಷವನ್ನು ಸೋಲಿಸುವುದಕ್ಕೆ ಮೈತ್ರಿ ಮಾಡಿಕೊಳ್ಳುವುದಲ್ಲ , ರಾಜ್ಯದ ಅಭಿವೃದ್ಧಿಗೆ ಮೈತ್ರಿ ಮಾಡಿಕೊಂಡು ಒಂದಾಗಬೇಕು  ಎಂದು ಹೇಳಿದರು.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read