BIG NEWS: ಉಡುಪಿ – ಕಾರವಾರದಲ್ಲಿ ‘ವಂದೇ ಭಾರತ್’ ರೈಲು ನಿಲುಗಡೆಗೆ ಆದೇಶ

ಅತಿ ವೇಗವಾಗಿ ಸಂಚರಿಸುವ ರೈಲು ಎಂಬ ಹೆಗ್ಗಳಿಕೆ ಹೊಂದಿರುವ ‘ವಂದೇ ಭಾರತ್’ ಎಕ್ಸ್ಪ್ರೆಸ್ ದೇಶದ ಹಲವು ಭಾಗಗಳಲ್ಲಿ ಈಗಾಗಲೇ ಸಂಚರಿಸುತ್ತಿವೆ. ವೇಗದ ಕಾರಣಕ್ಕಾಗಿ ಈ ರೈಲುಗಳ ನಿಲ್ದಾಣಗಳನ್ನು ಕಡಿಮೆ ಮಾಡಲಾಗಿತ್ತು.

ಆದರೂ ಸಹ ಪ್ರಯಾಣಿಕರ ಅನುಕೂಲಕ್ಕಾಗಿ ‘ವಂದೇ ಭಾರತ್’ ಎಕ್ಸ್ಪ್ರೆಸ್ ರೈಲುಗಳನ್ನು ಕೆಲವೊಂದು ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ಮಾಡಲು ಅವಕಾಶ ನೀಡಬೇಕೆಂಬ ಬೇಡಿಕೆ ಕೇಳಿ ಬಂದಿತ್ತು.

ಇದೀಗ ಕೊಂಕಣ ರೈಲ್ವೆ ನಿಗಮದ ಅಧಿಕಾರಿಗಳು ಈ ಬೇಡಿಕೆಗೆ ಸ್ಪಂದಿಸಿದ್ದು, ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಮಡಂಗಾವ್ ಗೆ ವಾರದಲ್ಲಿ ಆರು ದಿನ ಸಂಚರಿಸುವ ‘ವಂದೇ ಭಾರತ್’ ರೈಲಿಗೆ ಉಡುಪಿ ಮತ್ತು ಕಾರವಾರ ನಿಲ್ದಾಣದಲ್ಲಿ ನಿಲುಗಡೆಗೆ ಸೂಚಿಸಿ ಆದೇಶ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read