BIG NEWS: ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟ ರಾಜ್ಯದ ನೇರಳೆ: ಇದೇ ಮೊದಲ ಬಾರಿಗೆ ಲಂಡನ್ ಗೆ ರಫ್ತು

ಬೆಂಗಳೂರು: ಕರ್ನಾಟಕದಲ್ಲಿ ಬೆಳೆಯುವ ನೇರಳೆ ಹಣ್ಣು ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇದೇ ಮೊದಲ ಬಾರಿಗೆ ನೇರಳೆ ಹಣ್ಣನ್ನು ಕರ್ನಾಟಕದಿಂದ ಲಂಡನ್‌ಗೆ ರಫ್ತು ಮಾಡಲಾಗುತ್ತಿದೆ.

ದೇಶದ ವಿವಿಧ ಭಾಗಗಳ ಸಾಂಪ್ರದಾಯಿಕ ಹಣ್ಣುಗಳನ್ನು ಜಾಗತಿಕ ಮಾರುಕಟ್ಟೆಗೆ ತಲುಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ನಮ್ಮ ನೆರಳೆ ಜಾಗತಿಕ ಮಟ್ಟಕ್ಕೆ! ಮೊದಲ ಬಾರಿಗೆ ಕರ್ನಾಟಕದ ತಾಜಾ ನೇರಳೆ ಹಣ್ಣುಗಳನ್ನು ಲಂಡನ್‌ಗೆ ರಫ್ತು ಮಾಡಲಾಗಿದೆ. ಇದು ನಮ್ಮ ರೈತರಿಗೆ ಮತ್ತು ರಾಜ್ಯಕ್ಕೆ ಹೆಮ್ಮೆಯ ಮೈಲಿಗಲ್ಲು. ಈ ರವಾನೆಯು ಕೇವಲ ಸಾಗಣೆಗಿಂತ ಹೆಚ್ಚಿನದನ್ನು ಸೂಚಿಸುತ್ತದೆ. ಇದು ಬೆಳೆಯುತ್ತಿರುವ ಭವಿಷ್ಯವನ್ನು ಸೂಚಿಸುತ್ತದೆ. ಏಕೆಂದರೆ ಇದು ಕೇವಲ ಒಂದು ಹಣ್ಣಿನ ಬಗ್ಗೆ ಅಲ್ಲ. ಇದು ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read