ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ರಚಿಸಿರುವ ‘ನೀರಿನ ಹೆಜ್ಜೆ’ ಕೃತಿ ಬಿಡುಗಡೆ ಸಮಾರಂಭ ನವೆಂಬರ್ 14ರಂದು ಸಂಜೆ 4 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ.
ರಾಜ್ಯದ ಜಲ ಸಂಪನ್ಮೂಲ ಇತಿಹಾಸ, ಸವಾಲುಗಳು ಮತ್ತು ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳ ಕುರಿತಾಗಿ ರಚಿಸಿರುವ ಪ್ರಬುದ್ಧ ಮತ್ತು ಒಳನೋಟವನ್ನು ಹೊಂದಿರುವ ಕೃತಿ ಇದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೀರಿನ ಹೆಜ್ಜೆ ಕೃತಿ ಬಿಡುಗಡೆ ಮಾಡಲಿದ್ದಾರೆ. ಕಾನೂನು ಸಚಿವ ಹೆಚ್.ಕೆ. ಪಾಟೀಲ್, ಭಾರಿ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ಸುಪ್ರೀಂಕೋರ್ಟ್ ಹಿರಿಯ ವಕೀಲ ಮೋಹನ್ ವಿ. ಕಾತರಕಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
