BIG NEWS : ರಾಜ್ಯದ ಹಲವೆಡೆ ವರುಣನ ಆರ್ಭಟ ; ಸಿಡಿಲು ಬಡಿದು ಮೂವರು ಸಾವು..!

ಬೆಂಗಳೂರು : ರಾಜ್ಯದಲ್ಲಿ ಬಿರು ಬೇಸಿಗೆಯ ನಡುವೆಯೂ, ಹಲವು ಜಿಲ್ಲೆಗಳಲ್ಲಿ ನಿನ್ನೆ ವರುಣನ ಆರ್ಭಟ ಜೋರಾಗಿತ್ತು.

ಶಿವಮೊಗ್ಗ , ಮಡಿಕೇರಿ ಚಿಕ್ಕಮಗಳೂರು , ವಿಜಯಪುರ , ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿನ್ನೆ ಭರ್ಜರಿ ಮಳೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ ಗಾಳಿ , ಗುಡುಗು ಸಹಿತ ಮಳೆಯಾಗಿದೆ. ಚಿಕ್ಕಮಗಳೂರಿನ, ಬಾಳೆಹೊನ್ನೂರು, ಎನ್ಆರ್ಪುರ, ಆವುತಿ, ಬೈಗೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಕೊಡಗಿನ ಹಲವೆಡೆ ಹಗುರ ಮಳೆಯಾಗಿದೆ. ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ.

ಸಿಡಿಲಿಗೆ ಮೂವರು ಬಲಿ

ವಿಜಯಪುರದಲ್ಲಿ ಸಿಡಿಲಿನ ಜೊತೆ ಭಾರಿ ಮಳೆಯಾಗಿದೆ. ಇಂಡಿ ತಾಲೂಕಿನಲ್ಲಿ 9 ನೇ ತರಗತಿ ವಿದ್ಯಾರ್ಥಿ ಬೀರಪ್ಪ, ಮಸಳಿ ಬಿ ಕೆ ಗ್ರಾಮದಲ್ಲಿ ಸೋಮಶೇಖರ ಕಾಶಿನಾಥ ಪಟ್ಟಣಶೆಟ್ಟಿ (45) ಹಾಗೂ ಚಡಚಣ ತಾಲೂಕಿನ ಹಾವಿನಾಳ ಗ್ರಾಮದಲ್ಲಿ ಸುನಂದಾ ಶ್ರೀಮಂತ ಡೊಳ್ಳಿ (50) ಎಂಬುವವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read