ಬೆಂಗಳೂರು: ಭಾರತವು ತನ್ನ ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ವಾಯುಯಾನ ಕುಸಿತವನ್ನು ಕಾಣುತ್ತಿದೆ. ಸಾವಿರಾರು ವಿಮಾನಗಳು ರದ್ದಾಗಿವೆ. ನಮ್ಮ ಜನರು ಎಲ್ಲೆಡೆ ಸಿಲುಕಿಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಇಂಡಿಗೋ ವಿಮಾನಗಳ ಹಾರಾಟ ರದ್ದತಿ ಅವ್ಯವಸ್ಥೆಯಿಂದ ಪ್ರಯಾಣಿಕರಿಗೆ ಆಗಿರುವ ತೊಂದರೆ ಬಗ್ಗೆ ಕಿಡಿಕಾರಿರುವ ಅವರು, ಇಂಡಿಗೋ ವೈಫಲ್ಯವು ಸರ್ಕಾರದ ಏಕಸ್ವಾಮ್ಯ ಮಾದರಿಯ ನೇರ ಪರಿಣಾಮವಾಗಿದೆ. ಮತ್ತು ಯಾವಾಗಲೂ ಹಾಗೆ, ಸಾಮಾನ್ಯ ಭಾರತೀಯರು ಬೆಲೆ ತೆರುತ್ತಿದ್ದಾರೆ. ವರ್ಷಕ್ಕೆ ಸುಮಾರು 40 ಮಿಲಿಯನ್ ಪ್ರಯಾಣಿಕರನ್ನು ಹೊಂದಿರುವ ಭಾರತದ 3 ನೇ ಜನನಿಬಿಡ ವಿಮಾನ ನಿಲ್ದಾಣವಾಗಿರುವ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಸಂಪೂರ್ಣ ಅವ್ಯವಸ್ಥೆಯಲ್ಲಿದೆ. ಇದು ಕುಟುಂಬಗಳು, ವ್ಯವಹಾರಗಳು ಮತ್ತು ನಮ್ಮ ರಾಷ್ಟ್ರೀಯ ಖ್ಯಾತಿಗೆ ಧಕ್ಕೆ ತರುತ್ತಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ತಕ್ಷಣವೇ ಕಾರ್ಯನಿರ್ವಹಿಸಿ ಈ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಬೇಕೆಂದು ಒತ್ತಾಯಿಸಿದ್ದಾರೆ.
India is witnessing the worst aviation meltdown in its history. Thousands of flights cancelled – leaving our people stranded everywhere.
— DK Shivakumar (@DKShivakumar) December 6, 2025
The IndiGo fiasco is the direct result of the Govt’s monopoly model. And as always, it is ordinary Indians who are paying the price.
The…
