BREAKING : ಮೀಟರ್ ಬಡ್ಡಿ ದಂಧೆಕೋರರಿಗೆ ಬಿಗ್ ಶಾಕ್ : ಬೆಂಗಳೂರಿನ ಹಲವೆಡೆ ‘CCB’ ದಾಳಿ, ಹಣ- ಚಿನ್ನಾಭರಣ ಜಪ್ತಿ

ಬೆಂಗಳೂರು : ಬೆಂಗಳೂರಿನಲ್ಲಿ ಮೀಟರ್ ಬಡ್ಡಿ ದಂಧೆಕೋರರಿಗೆ ಬಿಗ್ ಶಾಕ್ ಎದುರಾಗಿದ್ದು, ಬೆಂಗಳೂರಿನ ಹಲವೆಡೆ ಸಿಸಿಬಿ ದಾಳಿ ನಡೆಸಿ ಹಣ-ಆಸ್ತಿಪಾಸ್ತಿ ಜಪ್ತಿ ಮಾಡಿದೆ.

ಬೆಂಗಳೂರಿನ ನಾಲ್ಕು ಕಡೆ ಸಿಸಿಬಿ ದಾಳಿ ನಡೆಸಿದ್ದು, ನಗದು, ಹಣ ಹಾಗೂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದೆ. ಚಾಮರಾಜಪೇಟೆ, ಬಸವೇಶ್ವರನಗರ, ಸಿಟಿ ಮಾರ್ಕೆಟ್ , ಕಾಮಾಕ್ಷಿ ಪಾಳ್ಯದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ಎಎಸ್ ಐ ಮಗಳಾದ ಶೀಲಾ ಎನ್ನುವವರ ಮನೆ ಹಾಗೂ ಕಾಮಾಕ್ಷಿಪಾಳ್ಯದಲ್ಲಿ ಜಗದೀಶ್ ಅಲಿಯಾಸ್ ಟಾಮಿ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಶಕ್ ನೀಡಿದ್ದಾರೆ. ಮೀಡರ್ ಬಡ್ಡಿ ದಂಧೆ ನಡೆಸುತ್ತಿದ್ದ ಅವರ ಮೇಲೆ ಮನಿ ಲಾಂಡರಿಂಗ್ ಕಾಯಿದೆಯಡಿ ಕೇಸ್ ದಾಖಲಿಸಲಾಗಿದೆ.

ದಾಳಿ ವೇಳೆ 42 ಲಕ್ಷ ಹಣ, ಚಿನ್ನಾಭರಣ, ಪಾಸ್ ಪುಸ್ತಕ ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read