ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ಖಾಸಗಿ ಬಸ್ ದರ 3 ಪಟ್ಟು ಏರಿಕೆ

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಶಾಕ್ ಕಾದಿದೆ. ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋರಟವರು 3 ಪಟ್ಟು ಹೆಚ್ಚು ಹಣ ಕೊಟ್ಟು ಬಸ್ ಪ್ರಯಾಣ ಮಾಡಬೇಕಿದೆ.

ಹೌದು, ಶಕ್ತಿ ಯೋಜನೆ ಪರಿಣಾಮ ಖಾಸಗಿ ಬಸ್ ಗಳು ಏಕಾಏಕಿ ಬಸ್ ಟಿಕೆಟ್ ಗಳ ದರವನ್ನು 3 ಪಟ್ಟು ಹೆಚ್ಚಳ ಮಾಡಲು ಮುಂದಾಗಿದ್ದು, ಗೌರಿ ಗಣೇಶ ಹಬ್ಬಕ್ಕೆ ಊರಿಗೆ  ಹೋಗುವವರು ದುಬಾರಿ ಬೆಲೆಯ ಟಿಕೆಟ್ ಖರೀದಿಸಿ ಪ್ರಯಾಣಿಸುವ ಆತಂಕ ಶುರುವಾಗಿದೆ.

700 ರೂಪಾಯಿ ಇದ್ದ ಬಸ್ ನ ಸಾಮಾನ್ಯ ದರ​ ಇದೀಗ ರೂ.2,500 ರಿಂದ ರೂ. 3000ಕ್ಕೆ ಏರಿಕೆಯಾಗಿದೆ. ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಖಾಸಗಿ ಬಸ್ ದರ ಏರಿಕೆ ಮಾಡಿದ್ದರೂ ಇಲಾಖೆಯೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read