ಕೋಲಾರ : ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ ಬಳಿ ನಡೆದಿದೆ.
ಇಬ್ಬರು ಬಾಲಕಿಯರ ಸಾವಿನ ಕೇಸ್ ಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಾವಿಯಲ್ಲಿ ಇತ್ತೀಚೆಗೆ ಇಬ್ಬರು ಬಾಲಕಿಯರ ಶವ ಪತ್ತೆಯಾಗಿತ್ತು. ಮೊದಲಿಗೆ ಇದು ಕೊಲೆ ಎಂದು ಶಂಕಿಸಲಾಗಿತ್ತು, ನಂತರ ಇದು ಸೂಸೈಡ್ ಎಂದು ತನಿಖೆಯಲ್ಲಿ ಬಯಲಾಗಿದೆ.
ಮೃತರನ್ನು ಧನ್ಯ ಬಾಯಿ (13) ಚೈತ್ರ ಬಾಯಿ (13) ಎಂದು ಗುರುತಿಸಲಾಗಿದೆ. ಬಾಲಕಿಯರು ಅ.2 ರಂದು ಮುಳಬಾಗಿಲು ತಾಲೂಕಿನ ಯಳಚೇಪಲ್ಲಿ ಎಂಬ ಗ್ರಾಮದಿಂದ ನಾಪತ್ತೆಯಾಗಿದ್ದರು.. ಘಟನೆ ಸಂಬಂಧ ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.