ಬೆಂಗಳೂರು : ‘ಬಿಗ್ ಬಾಸ್’ ರಿಯಾಲಿಟಿ ಶೋ ಯಾವತ್ತಿಗೂ ನಿಲ್ಲೋದಿಲ್ಲ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ.
ಬಿಗ್ ಬಾಸ್ ವೇದಿಕೆಯಲ್ಲಿ ಮಾತನಾಡಿದ ನಟ ಕಿಚ್ಚ ಸುದೀಪ್ ಬಿಗ್ ಬಾಸ್’ ರಿಯಾಲಿಟಿ ಶೋ ಯಾವತ್ತಿಗೂ ನಿಲ್ಲೋಲ್ಲ, ನಿಮ್ಮ ಪ್ರೀತಿ, ಸಹಕಾರ ಇರುವವರೆಗೂ ಶೋ ನಿಲ್ಲಲ್ಲ.ಬಿಗ್ ಬಾಸ್ ಶೋ ಮುಂದುವರೆಸಿಲು ಸಹಕರಿಸಿದವರಿಗೆ ಧನ್ಯವಾದಗಳು ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ.
ನಿಯಮ ಉಲ್ಲಂಘನೆ ಹಿನ್ನೆಲೆ ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಲಾಗಿತ್ತು. ನಂತರ ಬೆಂಗಳೂರು ಡಿಸಿ 10 ದಿನ ಕಾಲಾವಕಾಶ ನಿಡಿದ ಹಿನ್ನೆಲೆ ಗೇಟ್ ಬೀಗ ತೆಗೆಯಲಾಗಿತ್ತು. ನಂತರ ‘ಬಿಗ್ ಬಾಸ್’ ಮನೆಗೆ ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು.
ಡಿಸಿಎಂ ಡಿಕೆಶಿಗೆ ಕಿಚ್ಚ ಸುದೀಪ್ ಧನ್ಯವಾದ
ಡಿ.ಕೆ. ಶಿವಕುಮಾರ್ ಸಕಾಲಿಕ ಬೆಂಬಲಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು. ಇತ್ತೀಚಿನ ಅವ್ಯವಸ್ಥೆ ಅಥವಾ ಗೊಂದಲಗಳಲ್ಲಿ BBK ಭಾಗಿಯಾಗಿಲ್ಲ ಅಥವಾ ಭಾಗಿಯಾಗಿಲ್ಲ ಎಂದು ಒಪ್ಪಿಕೊಂಡಿದ್ದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ.ನನ್ನ ಕರೆಗೆ ತಕ್ಷಣ ಸ್ಪಂದಿಸಿದ್ದಕ್ಕಾಗಿ DCM ಅವರನ್ನು ನಾನು ನಿಜವಾಗಿಯೂ ಪ್ರಶಂಸಿಸುತ್ತೇನೆ ಮತ್ತು ಅವರ ಸಮರ್ಪಿತ ಪ್ರಯತ್ನಗಳಿಗೆ Nalpad ಅವರಿಗೆ ಧನ್ಯವಾದಗಳು. BBK12 ಇಲ್ಲಿಯೇ ಇರಲಿದೆ ಎಂದು ಸುದೀಪ್ ತಿಳಿಸಿದ್ದಾರೆ.
.