BIGG NEWS : ಬಿಜೆಪಿ, ಜೆಡಿಎಸ್ ನ 20 ಮಂದಿ ನನ್ನ ಸಂಪರ್ಕದಲ್ಲಿದ್ದಾರೆ : ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್

ಚಾಮರಾಜನಗರ : ಕಾಂಗ್ರೆಸ್ ಸೇರ್ಪಡೆ ಸಂಬಂಧ ಬಿಜೆಪಿ, ಜೆಡಿಎಸ್ ನ 20 ಮಂದಿ ನನ್ನ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಬರಲಿರುವ 20 ಮಂದಿ ನನ್ನ ಸಂಪರ್ಕದಲ್ಲಿದ್ದಾರೆ. ಪಕ್ಷದ ತತ್ವ ಸಿದ್ಧಾಂತಕ್ಕೆ ಒಪ್ಪಿ ಬರುವವರು ಖಂಡಿತ ಕಾಂಗ್ರೆಸ್ ಪಕ್ಷಕ್ಕೆಬರಬಹುದು ಎಂದು ಹೇಳಿದ್ದಾರೆ.

ಬಿಜೆಪಿ ಅವರು ಸುಮ್ಮನಿರುವವರಲ್ಲ. ತೊಂದರೆ ಮಾಡುತ್ತಲೆ ಇರುತ್ತಾರೆ. ನಮ್ಮನ್ನು ಜಗ್ಗಬಾರದು ಅಂಥಲೇ ಅವರನ್ನು ಜಗ್ಗಿದ್ದೀವಿ. ಆಪರೇಷನ್ ಕಮಲ ಸಂಬಂಧ ಆಡಳಿತ ನಡೆಸುವವರಿಗೆ ಭಯ ಇದ್ದೇ ಇದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read