BIGG NEWS : ಸಿದ್ದರಾಮಯ್ಯ-ಡಿಕೆಶಿ ಜೋಡಿ ಈ ರಾಜ್ಯಕ್ಕೆ ಶಾಪ : ಬಿಜೆಪಿ MLC ಎನ್. ರವಿಕುಮಾರ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈ ರಾಜ್ಯಕ್ಕೆ ಶಾಪ ಎಂದು ಬಿಜೆಪಿ ಎಂಎಲ್ ಸಿ ರವಿಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ.

ಫ್ರೀಡಂಪಾರ್ಕ್ ನಲ್ಲಿ ಇಂದು ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಈ ರಾಜ್ಯಕ್ಕೆ ಶಾಪ. ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಸಿದ್ದರಾಮಯ್ಯ ಅವರು ಮೊದಲು ಕನ್ನಡ ಕಲಿಸಿ, ನೀವು ವ್ಯಾಕರಣ ಮೇಷ್ಟ್ರು ಅಲ್ವಾ? ಖಾದರ್ ಮೊದಲು ಕನ್ನಡ ಕಲಿಸಿ. ಸಿದ್ದರಾಮಯ್ಯ ಪ್ರಜಾಪ್ರಭುತ್ವವಾದಿ ಅಲ್ಲ, ಪ್ರಜಾಪ್ರಭುತ್ವವ್ಯಾದಿ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಶಾಸಕರ ಅಮಾನತು ವಿರೋಧಿಸಿ ಇಂದು ಬಿಜೆಪಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ವಿಧಾನಸಭೆ ಅಧ್ಯಕ್ಷರು ಕಲಾಪವನ್ನು ಸರ್ವಾಧಿಕಾರಿಯಂತೆ ನಡೆಸಿದ್ದಾರೆ. ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿದ್ದಾರೆ. ಇದನ್ನು ವಿರೋಧಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read